ಕೆಪಿಎಸ್ಸಿ ಪರೀಕ್ಷೆ ಭಾರಿ ಅಕ್ರಮ ಜಾಲ ಪತ್ತೆ, ಆರೋಪಿಗಳ ಬಂಧನ
ಕಲಬುರಗಿ: ಕೆಪಿಎಸ್ಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ಹಣ ಪಡೆದು, ಪರೀಕ್ಷೆ ವೇಳೆ ಫೋನ್ ಮೂಲಕ ಉತ್ತರ ನೀಡುತ್ತಿದ್ದವರ ಅಕ್ರಮ ಜಾಲ ಪತ್ತೆ ಹಚ್ಚಿದ ಪೊಲೀಸರು ಮಂಗಳವಾರ ಹಲವರನ್ನು ಬಂಧಿಸಿದ್ದಾರೆ.
ಅಶೋಕ್ ನಗರದ ಪೊಲೀಸರ ತನಿಖೆ ವೇಳೆ ಸಿಕ್ಕ ಮಾಹಿತಿಯಂತೆ ಅಫ್ಜಲಪುರದ ಚಂದ್ರಕಾಂತ್ ಹರಳಯ್ಯ ಮತ್ತು ಭೀಮರಾಯ ಹೂವಿನಹಳ್ಖಿ ಸೇರಿ ಹಲವರನ್ನು ಬಂಧಿಸಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಬಾಯಿ ಬಿಟ್ಟಿರುವ ಚಂದ್ರಕಾಂತ್, ಪ್ರತಿ ಹುದ್ದೆಗೆ 10 ರಿಂದ 12 ಲಕ್ಷ ಪಡೆದು 450ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಕೊಡಿಸಿದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಪ್ರಾಥಮಿಕ ಶಾಲಾ ಶಿಕ್ಷಕ ನದಾಫ್
ಫೆ. 25 ನಡೆದ ಎಫ್ಡಿಎ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕೆಲ ಉದ್ಯೋಗಾಕಾಂಕ್ಷಿಗಳು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಪೊಲೀಸರು ಮಂಗಳವಾರ ಅಕ್ರಮ ಜಾಲದ ಪತ್ತೆ ಹಚ್ಚಿ ವಿಚಾರಣೆ ಆರಂಭಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಪ್ರಾಥಮಿಕ ಶಾಲೆ ಶಿಕ್ಷಕ ನದಾಫ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ
No comments:
Post a Comment